ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.
ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್ಕ್ರಾಸ್ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…