ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.
ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್ಕ್ರಾಸ್ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…