ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.
ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್ಕ್ರಾಸ್ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…