Political mirror

ದೈವಸ್ಥಾನದಲ್ಲಿ ಪ್ರಮಾಣ ಮಾಡಿದರೂ ಪರಿಹಾರ ಸಿಗದ “ಅಡ್ಡ ಮತದಾನ” ಪ್ರಕರಣ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯದ ಮಾತ್ರವಲ್ಲ ರಾಜ್ಯದ  ರಾಜಕೀಯ ವಲಯದಲ್ಲಿ ಇದು ಅತ್ಯಂತ ಮಹತ್ವ ಪಡೆದ ಸಂಗತಿ. ಅಡ್ಡ ಮತದಾನದ ಬಗ್ಗೆ ದೈವಸ್ಥಾನದ ಮುಂದೆ ಪ್ರಮಾಣ ಮಾಡಿದರೂ “ಅಡ್ಡ ಮತದಾನ” ಮಾಡಿದ್ದು ಯಾರು ಎಂದು ತಿಳಿಯಲಿಲ್ಲ.

Advertisement
Advertisement

ಇಂತಹದ್ದೊಂದು ಅಪರೂಪದ ಘಟನೆಗೆ ಸಾಕ್ಷಿಯಾಯಿತು ಸುಳ್ಯದ ರಾಜಕೀಯ.

ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್‍ನ ಚುನಾವಣೆಯಲ್ಲಿ ಸುಳ್ಯ ತಾಲೂಕಿನ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಗಳಾಗಿ ಮತದಾನ ಮಾಡಿದ್ದ 17 ಜನರ ಪೈಕಿ 15 ಮಂದಿ ಕಾನತ್ತೂರು ನಾಲ್ವರ್ ದೈವಸ್ಥಾನದ ಸನ್ನಿಧಿಯಲ್ಲಿ `ತಾವು ಅಡ್ಡ ಮತದಾನ ಮಾಡಿಲ್ಲ‘ ಎಂದು ಪ್ರಮಾಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದೈವಸ್ಥಾನದಲ್ಲಿ ಪ್ರಮಾಣ ನಡೆದಿರುವುದನ್ನು ಬಿಜೆಪಿ ಮೂಲಗಳು ಖಚಿತ ಪಡಿಸಿವೆ.

ಸುಳ್ಯ ತಾಲೂಕಿನಿಂದ ಸ್ಪರ್ಧಿಸಿದ್ದ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದ ಅಡ್ಡ ಮತದಾನ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಎಸ್‍ಸಿಡಿಸಿಸಿ ಬ್ಯಾಂಕ್‍ನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅಭ್ಯರ್ಥಿಯಾಗಿ ವೆಂಕಟ್ ದಂಬೆಕೋಡಿ ಮತ್ತು ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರ ಬಳಗದ ಅಭ್ಯರ್ಥಿಯಾಗಿ ಕೆ.ಎಸ್.ದೇವರಾಜ್ ಸ್ಪರ್ಧಿಸಿದ್ದರು. ಸುಳ್ಯ ತಾಲೂಕಿನ 23 ಸಹಕಾರ ಸಂಘಗಳ ಪ್ರತಿನಿಧಿಗಳು ಮತದಾರರಾಗಿದ್ದರು. ಇದರಲ್ಲಿ 17 ಸಂಘಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕೈಯಲ್ಲಿ ಮತ್ತು ಆರು ಸಂಘಗಳು ಕಾಂಗ್ರೆಸ್ ಕೈಯಲ್ಲಿತ್ತು. ಆದುದರಿಂದ ಚುನಾವಣೆಯಲ್ಲಿ ವೆಂಕಟ್ ದಂಬೆಕೋಡಿ ಗೆಲುವು ನಿಶ್ಚಿತ ಎಂದು ಹೇಳಲಾಗಿತ್ತು. ಆದರೆ ಚುನಾವಣಾ ಫಲಿತಾಂಶ ಬಂದಾಗ 13 ಮತ ಪಡೆದ ಕೆ.ಎಸ್.ದೇವರಾಜ್ ಗೆಲುವು ಸಾಧಿಸಿ ನಿರ್ದೇಶಕರಾಗಿ ಆಯ್ಕೆಯಾದರು. ಏಳು ಮಂದಿ ಬಿಜೆಪಿ ಬೆಂಬಲಿತರು ಅಡ್ಡಮತದಾನ ಮಾಡಿದ ಕಾರಣ ಕೇವಲ 10 ಮತ ಪಡೆದ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಯಿತು.

ಇದು ಸುಳ್ಯದ ಬಿಜೆಪಿ ನಾಯಕರಲ್ಲಿ ಮತ್ತು ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಲೋಕಸಭಾ ಚುನಾವಣೆ ಮುಗಿದ ಮರುದಿನ ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಹೇಳಿದ್ದರು. ಚುನಾವಣೆ ಮುಗಿದ ಬಳಿಕ ಬಿಜೆಪಿಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದರೂ ಪರಿಹಾರ ಸಿಗಲಿಲ್ಲ. ಕೊನೆಗೆ  ಬಳಿಕ ಎಲ್ಲರೂ ದೈವಸ್ಥಾನದಲ್ಲಿ ಪ್ರಮಾಣ ಮಾಡುವಂತೆ ಸೂಚಿಸಿದ್ದರು. 17 ಮಂದಿಯ ಪೈಕಿ 15 ಮಂದಿ ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಅಡ್ಡಮತದಾನ ಮಾಡಿದವರೂ ಪ್ರಮಾಣ ಮಾಡಿದರೆ.?

15 ಮಂದಿ ಪ್ರಮಾಣ ಮಾಡುವ ಮೂಲಕ ಪ್ರಕರಣದ ಜಿಜ್ಞಾಸೆ ಇನ್ನಷ್ಟು ಹೆಚ್ಚಿಸಿದೆ. ಏಳು ಅಡ್ಡ ಮತ ಬಿದ್ದಿರುವ ಕಾರಣ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿರುವುದು ಖಚಿತವಾಗಿದ್ದರೂ, 15 ಮಂದಿ ಪ್ರಮಾಣಕ್ಕೆ ಬಂದಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಗಾದರೆ ಅಡ್ಡ ಮತದಾನ ಮಾಡಿದವರು ಯಾರು ಮತ್ತು ಅಡ್ಡ ಮತದಾನ ಮಾಡಿದವರೂ ಕೂಡ ಪ್ರಮಾಣ ಮಾಡಿದರೆ ಎಂಬ ಪ್ರಶ್ನೆ ಮತ್ತಷ್ಟು ಗಟ್ಟಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟು ಪಕ್ಷವು ಮುಂದೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ, ತನಿಖೆ ಮುಂದುವರಿಸಿ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಜರುಗಲಿಸಲಿದೆಯೇ ಅಥವಾ ಶಿಸ್ತು ಕ್ರಮ ಇಷ್ಟಕ್ಕೆ ಸೀಮಿತವೇ ಎಂಬ ಪ್ರಶ್ನೆಯನ್ನು ಕಾರ್ಯಕರ್ತರು ಮುಂದಿಡುತ್ತಿದ್ದಾರೆ.

ಹೆಚ್ಚಿದ ಒತ್ತಡ : ಕ್ರಮ ಕೈಗೊಳ್ಳುವವರು ಯಾರು ? :

ಸಂಘಪರಿವಾರದ ಭದ್ರಕೋಟೆ, ಬಿಜೆಪಿಯ ಗೆಲುವಿನ ಹೆಬ್ಬಾಗಿಲಿನಲ್ಲಿ  ಇಂತಹದ್ದೊಂದು ಪ್ರಕರಣ ನಡೆದಿರುವುದು  ಈಗ ರಾಜ್ಯಮಟ್ಟದಲ್ಲೂ ಚರ್ಚೆಯಾಗುತ್ತಿದೆ.ಆದರೆ ಈಗ ಯಾರ ನಿಯಂತ್ರಣದಲ್ಲೂ ಈ ಪ್ರಕರಣ ಇಲ್ಲದೇ ಇರುವುದೂ ಸ್ಪಷ್ಟವಾಗಿದೆ. ಚುನಾವಣೆ ಕಳೆದ ದಿನಗಳು ಕಳೆದರೂ ಯಾವುದೇ ಪರಿಹಾರ, ಕ್ರಮವೂ ಆಗಿಲ್ಲ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ಗುತ್ತಿಗಾರು ಭಾಗದ ವಾರ್ಡ್ ಒಂದರಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರಿಗೆ ಪತ್ರ ಬರೆದು ತಕ್ಷಣವೇ ಕ್ರಮ ಕೈಗೊಳ್ಳದೇ ಇದ್ದರೆ ಸಾಮೂಹಿಕವಾಗಿ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ. ಮೇ.10 ರವರೆಗೆ ಈ ಬಗ್ಗೆ ಗಡುವು ನೀಡಿದ್ದಾರೆ. ಈ ನಡುವೆ ಬಿಜೆಪಿ ಕಾರ್ಯಕರ್ತರು ಅಲ್ಲಲ್ಲಿ ಸಭೆ ನಡೆಸಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಲೇಬೇಕು ಎಂದು ಒತ್ತಾಯಿಸಿದ್ದಾರೆ.  ಆದರೆ  ಈಗ ಕ್ರಮ ಕೈಗೊಳ್ಳುವವರು ಯಾರು ಎಂಬುದೇ ಪ್ರಶ್ನೆಯಾಗಿದೆ. ಸಹಕಾರ ಭಾರತಿಯೋ ? ಬಿಜೆಪಿಯೋ ಎಂಬುದು ಈಗ ಪ್ರಶ್ನೆಯಾಗಿದೆ. ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಬಿಜೆಪಿ ಹಾಗೂ ಸಹಕಾರ ಭಾರತಿ ಪ್ರತ್ಯೇಕ ವಿಭಾಗಗಳು. ಬಿಜೆಪಿ ರಾಜಕೀಯವಾಗಿ ಬೆಳದರೆ ಸಹಕಾರ ಭಾರತಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಈಗ ಯಾರು ಕ್ರಮ ಕೈಗೊಳ್ಳುತ್ತಾರೆ ? ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಪ್ರಶ್ನೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

5 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

10 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

18 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

18 hours ago