ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಸಂಭಾಗಣದಲ್ಲಿ ನಡೆದ ದ್ಚಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆ ಕುರಿತು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳು ಒಳಗೊಂಡಿದ್ದು, ಮಂಗಳೂರು 24 ಪರೀಕ್ಷೆ ಕೇಂದ್ರ, ಮೂಡಬಿದ್ರೆ 04 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 07 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 09 ಪರೀಕ್ಷೆ ಕೇಂದ್ರ, ಬೆಳ್ತಂಗಡಿ ತಾಲೂಕು 04 ಪರೀಕ್ಷೆ ಕೇಂದ್ರ, ಸುಳ್ಯ ತಾಲೂಕು 03 ಪರೀಕ್ಷೆ ಕೇಂದ್ರ ಹೊಂದಿದೆ.
ಪರೀಕ್ಷೆಗೆ 17,137 ಬಾಲಕ ಮತ್ತು 17,209 ಬಾಲಕಿಯರು ಹಾಜರಾಗಲಿದ್ದಾರೆ. ಪರೀಕ್ಷೆಗೆ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4532 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,237 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ಡಿ.ಡಿ.ಪಿ.ಯು. ವಿಷ್ಣು ಮೂರ್ತಿ, ಡಿ.ಪಿ.ಪಿ.ಐ ಮಲ್ಲೇಶಪ್ಪ, ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಮತ್ತು ಮತ್ತಿತರು ಉಪಸ್ಥಿತರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…