ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಸಂಭಾಗಣದಲ್ಲಿ ನಡೆದ ದ್ಚಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆ ಕುರಿತು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳು ಒಳಗೊಂಡಿದ್ದು, ಮಂಗಳೂರು 24 ಪರೀಕ್ಷೆ ಕೇಂದ್ರ, ಮೂಡಬಿದ್ರೆ 04 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 07 ಪರೀಕ್ಷೆ ಕೇಂದ್ರ, ಪುತ್ತೂರು ತಾಲೂಕು 09 ಪರೀಕ್ಷೆ ಕೇಂದ್ರ, ಬೆಳ್ತಂಗಡಿ ತಾಲೂಕು 04 ಪರೀಕ್ಷೆ ಕೇಂದ್ರ, ಸುಳ್ಯ ತಾಲೂಕು 03 ಪರೀಕ್ಷೆ ಕೇಂದ್ರ ಹೊಂದಿದೆ.
ಪರೀಕ್ಷೆಗೆ 17,137 ಬಾಲಕ ಮತ್ತು 17,209 ಬಾಲಕಿಯರು ಹಾಜರಾಗಲಿದ್ದಾರೆ. ಪರೀಕ್ಷೆಗೆ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4532 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,237 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ಡಿ.ಡಿ.ಪಿ.ಯು. ವಿಷ್ಣು ಮೂರ್ತಿ, ಡಿ.ಪಿ.ಪಿ.ಐ ಮಲ್ಲೇಶಪ್ಪ, ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಮತ್ತು ಮತ್ತಿತರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…