ದ.ಕ.-ಉಡುಪಿ ಮರಳು ಸಮಸ್ಯೆ ಪರಿಹಾರಕ್ಕೆ ಸೆ.12ರಂದು ಸಭೆ

September 9, 2019
10:30 AM

ಸವಣೂರು : ದ.ಕ. ಹಾಗೂ ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನ ವಿಧಾನ ಸೌಧದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ನೇತೃತ್ವದಲ್ಲಿ ಸೆ.12ರಂದು ಸಭೆ ನಡೆಯಲಿದೆ.ಉಭಯ ಜಿಲ್ಲೆಗಳ ಸಂಸದರು,ಶಾಸಕರು,ಸಚಿವರು,ಜಿಲ್ಲಾ„ಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು,ಭೂ ವಿಜ್ಞಾನಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ನಿಯೋಗದಿಂದ ಮನವಿ:ಜಿಲ್ಲೆಯ ಮರಳು ಸಮಸ್ಯೆ ಕುರಿತು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಜಿಲ್ಲೆಯ ನಿಯೋಗದ ವತಿಯಿಂದ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿತ್ತು. ನಿಯೋಗದ ಮನವಿಗೆ ಸ್ಪಂದಿಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ಕರೆಯುವುದಾಗಿ ಸಚಿವರು ಭರವಸೆ ನೀಡಿದ್ದರು.
ಅಲ್ಲದೆ ಇಲ್ಲಿನ ನಿಯೋಗವು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಶಾಸಕ ಅಂಗಾರ ಅವರಿಗೂ ಮನವರಿಕೆ ಮಾಡಿದ್ದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸುರೇಶ್ ಕೆ ಪೆರಾಬೆ,ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ತೀರ್ಥರಾಮ ಕೆಡೆಂಜಿ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group