ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…