ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…