ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು ಹಿರಿಯ ಪತ್ರಕರ್ತ ವೆಂಕಟೇಶ್ ಬಂಟ್ವಾಳ್ ಅವರಿಗೆ ಸಾಂಕೇತಿಕವಾಗಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಅವರು, ಸಮ್ಮೇಳನದ ವೈಶಿಷ್ಟ್ಯಗಳನ್ನು ಹಾಗೂ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರ ನೀಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೂ,ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿರುವ ಹರೀಶ ಮಾಂಬಾಡಿ, ತಾಲೂಕು ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಲಪಾಡಿ, ಕೋಶಾಧಿಕಾರಿ ಯಾದವ ಕುಲಾಲ್, ಸದಸ್ಯರಾದ ವೆಂಕಟೇಶ್ ಬಂಟ್ವಾಳ, ಉದಯಶಂಕರ ನೀರ್ಪಾಜೆ, ರತ್ನದೇವ್ ಪುಂಜಾಲಕಟ್ಟೆ, ವಾಮನ ಪೂಜಾರಿ, ಸಂದೀಪ್ ಸಾಲ್ಯಾನ್, ಚಂದ್ರಶೇಖರ ಕಲ್ಮಲೆ ಈ ಸಂದರ್ಭ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…