ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…