ಮಂಗಳೂರು: ದ ಕ ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ಎಲ್ಲಾ ಕೊರೊನಾ ವೈರಸ್ ವರದಿಗಳು ನೆಗೆಟಿವ್ ಆಗಿದೆ. ಒಟ್ಟು 114 ಮಂದಿಯ ಪರೀಕ್ಷಾ ವರದಿ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಜಿಲ್ಲೆಯ 113 ಮಂದಿ ಪತ್ರಕರ್ತರ ಪರೀಕ್ಷಾ ವರದಿಯೂ ನೆಗೆಟಿವ್ ಆಗಿದೆ. ಹೀಗಾಗಿ ಭಾನುವಾರ ದ ಕ ಜಿಲ್ಲೆಗೆ ನೆಮ್ಮದಿಯ ದಿನವಾಗಿದೆ. ಈ ನಡುವೆ ಸೋಮವಾರದಿಂದ ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟಗಳಿಗೆ ವಿನಾಯಿತಿ ನೀಡಲಾಗಿದೆ.
ಭಾನುವಾರ 95 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದ್ದು 16 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಒಟ್ಟು 2243 ಮಂದಿ ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ.
ದ ಕ ಜಿಲ್ಲೆಯಲ್ಲಿ ಸೋಮವಾರದಿಂದ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದೊಂದಿಗೆ ನಿಯಮಗಳೊಂದಿಗೆ ಓಡಾಟ ಮಾಡಬಹುದು.
ರಾಜ್ಯದಲ್ಲಿ ಭಾನುವಾರ 13 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆಯಾಗಿದೆ. 25 ಮಂದಿ ಮೃತಪಟ್ಟಿದ್ದು 293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.ಕಲಬುರಗಿಯಲ್ಲಿ ಆರು, ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಇಂದು ಪತ್ತೆಯಾಗಿವೆ.
ಕಾಸರಗೋಡಿನಲ್ಲಿ ಸತತ 3 ನೇ ದಿನವೂ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ದೃಢಪಟ್ಟಿಲ್ಲ. ಕೇರಳದಲ್ಲಿ ಭಾನುವಾರ ಪ್ರಕರಣ ದಾಖಲಾಗಿಲ್ಲ.ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 5 ವರೆಗೆ ವಿನಾಯಿತಿ ನೀಡಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…