ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶನಿವಾರ 19 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1277ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel