ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಬ್ಬರು ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರು ಸಂಜೆಯ ವೇಳೆಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ಪಟ್ಟಣ ಹಾಗೂ ಮಂಗಳೂರಿನ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಯ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್ ಘೋಷಣೆ ಮಾಡಲಾಗಿದೆ.
ಗುರುವಾರ ಉಸಿರಾಟದ ಸಮಸ್ಯೆಯಿಂದ 14 ಮಂದಿಯ ಪ್ರಕರಣ ದಾಖಲಾಗಿದ್ದು ಇವುಗಳಲ್ಲಿ 8 ಪ್ರಕರಣಗಳನ್ನು ವೆನ್ಲಾಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಒಟ್ಟು 39 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ರಕ್ತ ಪರೀಕ್ಷೆಯ ವರದಿ ಬರಲು ಬಾಕಿ ಇದೆ. 214 ಮಂದಿಯ ತಪಾಸಣಾ ವರದಿ ಬಂದಿತ್ತು, ಅದರಲ್ಲಿ 1 ಪಾಸಿಟಿವ್ ಕಂಡುಬಂದಿತ್ತು. ಉಳಿದ 213 ಮಂದಿಯದ್ದು ನೆಗೆಟಿವ್ ವರದಿ ಕಂಡುಬಂದಿತ್ತು. ಇಂದು ಕೂಡಾ 95 ಮಂದಿ ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಯಾವುದೇ ಹೊಸ ಪ್ರಕರಣ ಕಂಡುಬಂದಿಲ್ಲ. ಇನ್ನು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…