Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಇನ್ನೊಂದು ಸೀಲ್ಡೌನ್ ಪ್ರದೇಶ | ಉಡುಪಿ- ಕಾಸರಗೋಡಿನಲ್ಲಿ ಗುರುವಾರ ನೆಮ್ಮದಿ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಗುರುವಾರ  ಒಬ್ಬರು ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರು ಸಂಜೆಯ ವೇಳೆಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ಪಟ್ಟಣ ಹಾಗೂ ಮಂಗಳೂರಿನ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಯ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್  ಘೋಷಣೆ ಮಾಡಲಾಗಿದೆ.

ಗುರುವಾರ ಉಸಿರಾಟದ ಸಮಸ್ಯೆಯಿಂದ 14 ಮಂದಿಯ ಪ್ರಕರಣ ದಾಖಲಾಗಿದ್ದು ಇವುಗಳಲ್ಲಿ 8  ಪ್ರಕರಣಗಳನ್ನು  ವೆನ್ಲಾಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಒಟ್ಟು 39 ಮಂದಿಯನ್ನು  ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ರಕ್ತ ಪರೀಕ್ಷೆಯ ವರದಿ ಬರಲು ಬಾಕಿ ಇದೆ. 214 ಮಂದಿಯ ತಪಾಸಣಾ ವರದಿ ಬಂದಿತ್ತು, ಅದರಲ್ಲಿ  1 ಪಾಸಿಟಿವ್ ಕಂಡುಬಂದಿತ್ತು. ಉಳಿದ 213 ಮಂದಿಯದ್ದು ನೆಗೆಟಿವ್ ವರದಿ ಕಂಡುಬಂದಿತ್ತು. ಇಂದು ಕೂಡಾ 95 ಮಂದಿ ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ  ಯಾವುದೇ ಪ್ರಕರಣ ದಾಖಲಾಗಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಯಾವುದೇ ಹೊಸ ಪ್ರಕರಣ ಕಂಡುಬಂದಿಲ್ಲ. ಇನ್ನು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

5 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

5 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

13 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

13 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 days ago