ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಬ್ಬರು ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರು ಸಂಜೆಯ ವೇಳೆಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ಪಟ್ಟಣ ಹಾಗೂ ಮಂಗಳೂರಿನ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಯ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್ ಘೋಷಣೆ ಮಾಡಲಾಗಿದೆ.
ಗುರುವಾರ ಉಸಿರಾಟದ ಸಮಸ್ಯೆಯಿಂದ 14 ಮಂದಿಯ ಪ್ರಕರಣ ದಾಖಲಾಗಿದ್ದು ಇವುಗಳಲ್ಲಿ 8 ಪ್ರಕರಣಗಳನ್ನು ವೆನ್ಲಾಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಒಟ್ಟು 39 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ರಕ್ತ ಪರೀಕ್ಷೆಯ ವರದಿ ಬರಲು ಬಾಕಿ ಇದೆ. 214 ಮಂದಿಯ ತಪಾಸಣಾ ವರದಿ ಬಂದಿತ್ತು, ಅದರಲ್ಲಿ 1 ಪಾಸಿಟಿವ್ ಕಂಡುಬಂದಿತ್ತು. ಉಳಿದ 213 ಮಂದಿಯದ್ದು ನೆಗೆಟಿವ್ ವರದಿ ಕಂಡುಬಂದಿತ್ತು. ಇಂದು ಕೂಡಾ 95 ಮಂದಿ ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಯಾವುದೇ ಹೊಸ ಪ್ರಕರಣ ಕಂಡುಬಂದಿಲ್ಲ. ಇನ್ನು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…