ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಮಾಡುವಂತೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಲಾಕ್ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳೀನ್ ಕುಮಾರ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿಡಿಯೋ ಕಾನ್ಫರೆನ್ಸ್ ಬಳಿಕ ದ.ಕ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…