ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಮಾಡುವಂತೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಲಾಕ್ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳೀನ್ ಕುಮಾರ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿಡಿಯೋ ಕಾನ್ಫರೆನ್ಸ್ ಬಳಿಕ ದ.ಕ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…