ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೊಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲಾ 12 ಮಂದಿಯೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆದರೆ ಶುಕ್ರವಾರದಂದು ಒಂದು ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾದ ವ್ಯಕ್ತಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರದಂದು ಪಾಸಿಟಿವ್ ಪತ್ತೆಯಾದ ವ್ಯಕ್ತಿ ವೆನ್ ಲಾಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವವರ ಪೈಕಿ 15 ಮಂದಿ ಬಿಡುಗಡೆಗೊಂಡಿದ್ದಾರೆ. 588 ಮಂದಿ ಹೋಂ ಕ್ವಾರೆಂಟೈನ್ ಮುಗಿಸಿದ್ದಾರೆ. ಇದುವರೆಗೆ 5485 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಪೂರೈಸಿದ್ದಾರೆ. ಈ ಪೈಕಿ ಯಾರಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿಲ್ಲ. ಶುಕ್ರವಾರದಂದು ಸುಮಾರು 90 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು 89 ಮಂದಿಯ ವರದಿ ನೆಗೆಟಿವ್ ಬಂದಿದೆ. 1 ಮಾತ್ರಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ನಡೆಯುತ್ತಿದೆ. 28 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿಯಲ್ಲಿ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.
ರಾಜ್ಯದಲ್ಲಿ ಸಂಜೆಯವರೆಗೆ ಒಟ್ಟು 359 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ಒಟ್ಟು 44 ಹೊಸ ಪ್ರಕರಣ ಪತ್ತೆಯಾಗಿದೆ.
ಈ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯ ಆರು ಮಂದಿ ಶುಕ್ರವಾರದಂದು ಗುಣಮುಖರಾಗಿದ್ದಾರೆ. ಇಡೀ ಕೇರಳದಲ್ಲಿ ಕೇವಲ 1 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಸರಕಾರದ ವರದಿ ಪ್ರಕಟಿಸಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…