ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲದ ಸೋಮೇಶ್ವರದ ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಮಹಿಳೆಗೆ ಫಸ್ಟ್ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.
ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ ರಷ್ಯಾ ಇದ್ದು, ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಇದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…