MIRROR FOCUS

ದ ಕ ಜಿಲ್ಲೆಯಲ್ಲಿ ಬುಧವಾರ ಕೊರೊನಾ ಕಂಟಕ | ಕೊರೊನಾ ವೈರಸ್ ಒಂದು ಪಾಸಿಟಿವ್ | ಕೊರೊನಾಕ್ಕೆ ಒಂದು ಬಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಉಳ್ಳಾಲದ ಸೋಮೇಶ್ವರದ  ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು  ಖಚಿತವಾಗಿದೆ. ಮಹಿಳೆಗೆ ಫಸ್ಟ್‌ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು  ದೃಢಪಟ್ಟಿದೆ.

ರಾಜ್ಯದಲ್ಲಿ  ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.

ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.

Advertisement

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ  290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ  ರಷ್ಯಾ ಇದ್ದು,  ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ  ಕೊರೊನಾ ಪಾಸಿಟಿವ್ ಇದೆ.

Advertisement

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

4 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

11 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

12 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

20 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

21 hours ago