Advertisement
MIRROR FOCUS

ದ ಕ ಜಿಲ್ಲೆಯಲ್ಲಿ ಬುಧವಾರ ಕೊರೊನಾ ಕಂಟಕ | ಕೊರೊನಾ ವೈರಸ್ ಒಂದು ಪಾಸಿಟಿವ್ | ಕೊರೊನಾಕ್ಕೆ ಒಂದು ಬಲಿ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಉಳ್ಳಾಲದ ಸೋಮೇಶ್ವರದ  ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು  ಖಚಿತವಾಗಿದೆ. ಮಹಿಳೆಗೆ ಫಸ್ಟ್‌ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು  ದೃಢಪಟ್ಟಿದೆ.

ರಾಜ್ಯದಲ್ಲಿ  ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.

ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ  290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ  ರಷ್ಯಾ ಇದ್ದು,  ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ  ಕೊರೊನಾ ಪಾಸಿಟಿವ್ ಇದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago