ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲದ ಸೋಮೇಶ್ವರದ ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಮಹಿಳೆಗೆ ಫಸ್ಟ್ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.
ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ ರಷ್ಯಾ ಇದ್ದು, ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಇದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…