ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೊನಾ ವೈರಸ್ ಪರೀಕ್ಷೆಯ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಬುಧವಾರ 11 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಬುಧವಾರ 151 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಒಟ್ಟು 495 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಇದುವರೆಗೆ ಒಟ್ಟು 6069 ಮಂದಿ 28 ದಿನಗಳ ಹೋಂಕ್ವಾರಂಟೈನ್ ಮುಗಿಸಿದ್ದಾರೆ. ಈಗ ಜಿಲ್ಲೆಯಲ್ಲಿ ಒಟ್ಟು 63 ಮಂದಿ ಕ್ವಾರಂಟೈನ್ ನಲ್ಲಿ ಇದ್ದಾರೆ.
ಬುಧವಾರ ಉಸಿರಾಟದ ತೊಂದರೆ ಇರುವ ಒಟ್ಟು 12 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 941 ಮಂದಿ ಫಿವರ್ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ರಾಜ್ಯದಲ್ಲಿ ಬುಧವಾರ 9 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಇಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ. ಇದುವರೆಗೆ 17 ಜನರು ಮೃತಪಟ್ಟಿದ್ದು, 131 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿಲ್ಲ. ಕೇರಳದಲ್ಲಿ 11 ಪ್ರಕರಣ ದೃಢಪಟ್ಟಿದೆ. ಕಾಸರಗೋಡು ಜಿಲ್ಲೆಯಲ್ಲಿ 26 ಮಂದಿ ಸೋಂಕಿತರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 172 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 146 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…