ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳಾಗಿದ್ದು ಫಸ್ಟ್ ನ್ಯೂರೋ ಸಂಪರ್ಕದಿಂದ ಇಬ್ಬರಿಗೆ ಸೋಂಕು ದೃಢವಾಗಿದೆ. 50 ವರ್ಷದ ಮಹಿಳೆ ಹಾಗೂ 26 ವರ್ಷದ ಯುವಕನಿಗೆ ಪಾಸಿಟಿವ್ ಬಂದಿತ್ತು. ಇವರನ್ನು ಮಂಗಳೂರಿನಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.
ರಾಜ್ಯದಲ್ಲಿ ಒಂದೇ ದಿನ ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೇರಿಕೆಯಾಗಿದೆ. ಒಟ್ಟು 32 ಜನರು ಮೃತಪಟ್ಟಿದ್ದು, 426 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…