ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಗಳಾಗಿದ್ದು ಫಸ್ಟ್ ನ್ಯೂರೋ ಸಂಪರ್ಕದಿಂದ ಇಬ್ಬರಿಗೆ ಸೋಂಕು ದೃಢವಾಗಿದೆ. 50 ವರ್ಷದ ಮಹಿಳೆ ಹಾಗೂ 26 ವರ್ಷದ ಯುವಕನಿಗೆ ಪಾಸಿಟಿವ್ ಬಂದಿತ್ತು. ಇವರನ್ನು ಮಂಗಳೂರಿನಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.
ರಾಜ್ಯದಲ್ಲಿ ಒಂದೇ ದಿನ ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೇರಿಕೆಯಾಗಿದೆ. ಒಟ್ಟು 32 ಜನರು ಮೃತಪಟ್ಟಿದ್ದು, 426 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…