ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಉಡುಪಿ ಜಿಲ್ಲೆಯು ಇಂದು ಕೊರೊನಾ ವೈರಸ್ ಮುಕ್ತ ಜಿಲ್ಲೆಯಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಕರ್ನಾಟಕದಲ್ಲಿ ಒಂದೇ ದಿನ 29 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆಯವರೆಗೆ ಯಾವುದೇ ಕೊರೊನಾ ಪಾಸಿಟಿವ್ ವರದಿಗಳು ಪತ್ತೆಯಾಗಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಮಹಿಳೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ಕೊರೊನಾ ಮುಕ್ತ ಜಿಲ್ಲೆಯಾಗಿದೆ.ಕೊರೊನಾ ಸೋಂಕಿತೆ ಗರ್ಭಿಣಿಯ ಪತಿಯು ಗಲ್ಫ್ ದೇಶದಿಂದ ಮರಳಿದ್ದು ಪತ್ನಿಗೆ ಸೋಂಕು ತಗುಲಿತ್ತು. ಸೋಂಕಿತೆ ಗರ್ಭಿಣಿಯಾದ ಕಾರಣದಿಂದಾಗಿ ಈ ಪ್ರಕರಣದ ಮೇಲೆ ಹೆಚ್ಚಿನ ನಿಗಾ ವಹಿಸಿ ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಒಂದೇ ದಿನ ಬರೋಬ್ಬರಿ 29 ಮಂದಿಯಲ್ಲಿ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿಯೇ 19 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಂಜೆಯ ವೇಳೆಗೆ ರಾಜ್ಯದ ಎಲ್ಲಾ ಪ್ರಕರಣಗಳು ಸೇರಿ ಒಟ್ಟು 29 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದುವರೆಗೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.ಇಡೀ ಕೇರಳದಲ್ಲಿ ಒಟ್ಟು 3 ಪ್ರಕರಣ ಮಾತ್ರಾ ಕಂಡುಬಂದಿದೆ. ಈ ಮೂಲಕ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 450 ಕ್ಕೆ ಏರಿಕೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…