ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೊನ್ನೆಯಾಗಿದ್ದ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಇದೀಗ ಬೆಂಬಿಡದೆ ಕಾಡುತ್ತಿದೆ. ಈಚೆಗೆ ಸಮುದಾಯಕ್ಕೆ ಹರಡಲು ಆರಂಭವಾಗಿದ್ದು , ಮೂಲ ಪತ್ತೆ ಕಷ್ಟವಾಗುತ್ತಿದೆ. ಇದೀಗ ವೈದ್ಯರು, ನರ್ಸ್ , ಲ್ಯಾಬ್ ಸಿಬಂದಿಗಳು, ಪೊಲೀಸ್ ಸಿಬಂದಿಗಳಲ್ಲೂ ಕೊರೋನಾ ಪಾಸಿಟಿವ್ ಕಂಡುಬರುತ್ತಿದೆ. ಗುರುವಾರ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಲ್ಯಾಬ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮುಂದಿನ ಕೆಲವು ದಿನಗಳ ಕಾಲ ತೀರಾ ಎಚ್ಚರಿಕೆ ಬೇಕಾಗಿದ್ದು ಪ್ರತೀ ಗ್ರಾಮದಲ್ಲೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.
ಗುರುವಾರ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…