ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೊನ್ನೆಯಾಗಿದ್ದ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಇದೀಗ ಬೆಂಬಿಡದೆ ಕಾಡುತ್ತಿದೆ. ಈಚೆಗೆ ಸಮುದಾಯಕ್ಕೆ ಹರಡಲು ಆರಂಭವಾಗಿದ್ದು , ಮೂಲ ಪತ್ತೆ ಕಷ್ಟವಾಗುತ್ತಿದೆ. ಇದೀಗ ವೈದ್ಯರು, ನರ್ಸ್ , ಲ್ಯಾಬ್ ಸಿಬಂದಿಗಳು, ಪೊಲೀಸ್ ಸಿಬಂದಿಗಳಲ್ಲೂ ಕೊರೋನಾ ಪಾಸಿಟಿವ್ ಕಂಡುಬರುತ್ತಿದೆ. ಗುರುವಾರ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಲ್ಯಾಬ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮುಂದಿನ ಕೆಲವು ದಿನಗಳ ಕಾಲ ತೀರಾ ಎಚ್ಚರಿಕೆ ಬೇಕಾಗಿದ್ದು ಪ್ರತೀ ಗ್ರಾಮದಲ್ಲೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.
ಗುರುವಾರ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…