ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ 103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…