ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ 103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…