ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ 103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…