ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ 103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…