ದ ಕ ಜಿಲ್ಲೆಯಲ್ಲಿ 16 ಕೊರೊನಾ ಪಾಸಿಟಿವ್ | ದುಬೈನಿಂದ ವಾಪಾಸಾದವರಲ್ಲಿ ಕೊರೊನಾ ಪಾಸಿಟಿವ್ | ಎಲ್ಲರೂ ಕ್ವಾರಂಟೈನ್ ನಲ್ಲಿದ್ದರು |

May 15, 2020
12:55 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ  ಕೊರೊನಾ ಪಾಸಿಟಿವ್ ಇರುವುದು  ದೃಢಪಟ್ಟಿದೆ.  ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.  ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.

Advertisement
Advertisement

ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14  ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.  ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ  ಬಿಟ್ಟಿರಲಿಲ್ಲ.  ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.

ರಾಜ್ಯದಲ್ಲಿ  ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.

ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group