ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…