ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…