ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…