ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…