ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ದುಬೈನಿಂದ ಆಗಮಿಸಿದ 15 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರ ಜೊತೆ ಫಸ್ಟ್ ನ್ಯೂರೋ ಸಂಪರ್ಕದ ಒಬ್ಬ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಹೀಗಾಗಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಈಗ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಭಯಗೊಳ್ಳುವಂತಾಗಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ದುಬೈನಿಂದ 179 ಮಂದಿ ಆಗಮಿಸಿದ್ದರು. ಈ ಪೈಕಿ ದ.ಕ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 14 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇದಲ್ಲದೆ ಫಸ್ಟ್ ನ್ಯೂರೋ ನಂಟು ಹೊಂದಿದ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಯಾರ ಮನೆಯವರನ್ನೂ ಸಂಪರ್ಕಕ್ಕೆ ಜಿಲ್ಲಾಡಳಿತ ಬಿಟ್ಟಿರಲಿಲ್ಲ. ಹೀಗಾಗಿ ಈಗ ಹರಡುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದಲ್ಲಿ ಒಂದೇ ದಿನ 45 ಪ್ರಕರಣ ಶುಕ್ರವಾರ ಪತ್ತೆಯಾಗಿದೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…