ದ ಕ ಜಿಲ್ಲೆಯಲ್ಲಿ 311 ಕೊರೋನಾ ಪಾಸಿಟಿವ್‌ ಕೇಸ್‌ | ಕೇಳಿಸಿದೆ ಎಚ್ಚರಿಕೆಯ ಗಂಟೆ – ಪಾಲಿಸಿರಿ ಲಾಕ್ಡೌನ್‌ ನಿಯಮ |

July 17, 2020
8:58 PM

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರದಂದು 311  ಮಂದಿಯಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. ದಿನಂದ ದಿನಕ್ಕೆ ಪ್ರಕರಣ ಹೆಚ್ಚಾಗುತ್ತಿದ್ದು ಲಾಕ್ಡೌನ್‌ ನಿಯಮ ಪಾಲನೆಯಾಗಬೇಕು ಎಂಬ ಎಚ್ಚರಿಕೆಯ ಸಂದೇಶ ಇದೀಗ ಕಂಡುಬಂದಿದೆ.

ಶುಕ್ರವಾರದಂದು 311  ಮಂದಿಯಲ್ಲಿ  ಕೊರೋನಾ ಪಾಸಿಟಿವ್‌  ಕಂಡುಬರುವ ಮೂಲಕ  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ. ಈಗ 1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 84 ಜನರಲ್ಲಿ ಕೊರೋನಾ ಪಾಸಿಟಿವ್‌ ಪತ್ತೆಯಾಗಿದ್ದು  ಜಿಲ್ಲೆಯಲ್ಲಿ ಒಟ್ಟು   1979 ಪ್ರಕರಣ ದಾಖಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 32 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ  3,693 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರ 1028 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 20757 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಬೆಂಗಳೂರು ನಗರದಲ್ಲಿ 2,208 ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಒ ಟ್ಟು 3,693 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಶುಕ್ರವಾರದಂದು ಒಂದೇ ದಿನ ರಾಜ್ಯದಲ್ಲಿ 115 ಮಂದಿ  ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 1,147 ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror