ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…