ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…