ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…