ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…