ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…