ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.
ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…