ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.
ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…