ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.
ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…