ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.
ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…