ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

October 21, 2019
10:00 AM

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror